ವಿಷಯಕ್ಕೆ ಹೋಗಿ

ಐದು ಶುಕ್ರವಾರದ ಹಾಡು

ಇವತ್ತು ಹಾಗೇ ಶ್ರಾವಣ ಮಾಸದ ಸಂಪ್ರದಾಯದ ಐದು ಶುಕ್ರವಾರದ ಹಾಡು ಹೇಳ್ತಿದ್ದೆ.... ನಂಗಿಷ್ಟ ಆಗಿರೋ ಸಾಲುಗಳು .. ಹಹಹಹ 😄 😄 

.ಭಕ್ಷ್ಯ ಶ್ಯಾವಿಗೆ ಪರಮಾನ್ನ ಚಿತ್ರಾನ್ನ ಸಣ್ಣಕ್ಕಿ
ಶಾಲ್ಯಾನ್ನ ಸೂಪಗಳು
ಚಕ್ಕುಲಿ ಗಿಲಗಂಜಿ ಚೆಂದದ್  ಚಿರೋಟಿ
ಹಪ್ಪಳ ಸಂಡಿಗೆ ಆಂಬೋಡೆಗಳು

ಸಕ್ಕರೆ ಘೃತ ಕ್ಷೀರ ಸಕಲ ಪಕ್ವಾನ್ನ
ಮಂಡಿಗೆ ಬೀಸೋರಿಗೆ ಗುಳ್ಳೋರಿಗೆಯು
ಚಂದ್ರನಂತೆ ಹೊಳೆವ ಶ್ಯಾವಿಗೆಯ ಫೇಣಿಯು
ದಿವ್ಯ ಬೂಂದಿ ಬುರುಬುರಿ ಅನಾರಸವು

ಬೇಕಾದ ಬೇಸನ್ನು ಬಿಳಿಯಾದ ಅರಳಿನುಂಡೆ
ಮೋತಿಚೂರು ಚೂರ್ಮಲಾಡು
ಸೇತು ಬಿಳುಪಿನ ಚಕ್ರದಂಥ ಜಿಲೇಬಿ
ಸುಕಿನುಂಡೆ ಮುಖವಿಲಾಸಗಳು

ಹೋಳಿಗೆ ಎಣ್ಣೋರಿಗೆ ಹೊಯ್ಗಡವು ಗೇಹೂರಿ ಕಾಯಿಹಾಲು
ಕರಿದ ಹೂರಣ ಕಡುಬು
ತೇಂಗೋಳಲು ತಿರುವಿದ ಉದ್ದಿನಬೇಳೆ ಮೆಣಸು ಜೀರಿಗೆ
ಇಂಗು ಹಾಕಿದ ಉಪ್ಪಿನ ಕಡುಬು

ಸಾರು ಸಾಂಬಾರ ಪಡುವಲಕಾಯಿ ಪಳದ್ಯ ಉಪ್ಪೇರಿ
ಉಪ್ಪಿನಕಾಯಿರಸವು
ಖೀರು ಮಾಲದಿ ಗೌಲಿ ಪರಡಿ ಪರಮಾನ್ನ
ಮುಚ್ಚೋರೆ ಚಟ್ಟಣಿ ಕೋಸಂಬರಿಯು

ಹಾಗಲವು ಹೀರೆ ಸೌತೆ ಹಂದರದ ಅವರೆ ಚೌಳಿ
ಬಾಳೆ ಬೆಂಡೆ ಕುಂಬಳವು
ಮಾಗಿದ ಹಲಸಿನ ಕಾಯಿ ಕಲಸಿ ಮೇಲೋಗರ
ಗೆಣಸು ಗುಳ್ಳದಕಾಯಿ ಬಜ್ಜಿಗಳು

ಸಬ್ಜಿಭಾತು ಸೌತೆಭಾತು ಕೇಸರೀ ಭಾತು
ಕೆನೆಕೆನೆ ಮೊಸರು ಒಗ್ಗರಣೆ
ಹಸಿ ಅಲ್ಲ ಬಿಸಿ ಹಾಲು ಹೊಸಬೆಣ್ಣೆ ಇಂಗುಪ್ಪು
ಕಲಸಿ ಬಕಾಳಿ ಭಾತುಗಳು

ಕಡಲೆ ಹೂರಣ ಗಸಗಸೆ ಕೊಬ್ಬರಿ ಏಲಕ್ಕಿ
ಪುಡಿ ದ್ರಾಕ್ಷಿ ಉತ್ತತ್ತಿ ಹಳಕು
ಕಲಸಿ ಕಲ್ಲುಸಕ್ಕರೆ ಕರಿಗಡುಬು ಬೆಣ್ಣೆ ಕಾಸೀ
ತುಪ್ಪವು ಸೋಸಿಲಿಂದ. 

ಆಕ್ಚುವಲಿ , ನಾ ಈ ಹಾಡು ಹೇಳೊಕೆ ಇಲ್ಲಿ ವಿವರಿಸಿರುವ ,ಲಿಸ್ಟ್ ಮಾಡಿರೋ ತಿಂಡಿ ಹೆಸರುಗಳೇ ಕಾರಣ ಅಂತ ಮತ್ತೊಂದ್  ಸರಿ ಹೇಳಬೇಕಾ........ 😉😉😉😄😄😄😄

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕುವೆಂಪುರವರ ಕಲ್ಕಿ ಬಗೆಗೆ ಒಂದು ಅಭಿಪ್ರಾಯ

ಯಾರವನಲ್ಲಿ ದೂರದಲಿ... ಧಾವಿಸಿ ಬರುತಿಹ ಕ್ರೌರ್ಯದಲಿ... ಹಸಿವೆ....ದಾಹ....ರಕ್ತಾ..... ಇನ್ನೂ ಹಸಿವೆ    ಬಡವರ ಹೊಟ್ಟೆಯ ಬೆಂಕಿಯ ಹಸಿವೆ ಇನ್ನೂ ದಾಹ    ಬಡವರ ಗಂಟಲ ಬೇಗೆಯ ದಾಹ... ತುಂಬದೋ ಹೊಟ್ಟೆ ...         ಈ ಸಾಲುಗಳ...

ವಾಸ್ತವ

ಕುವೆಂಪುರವರು ಬರೆದ ಮೀನಾಕ್ಷಿ ಮನೆ ಮೇಷ್ಟ್ರು ಅನ್ನೋ ಒಂದು ಕಥೆಯಲ್ಲಿ ಮೇಷ್ಟರು ತನ್ನ ಊಹಾ ಪ್ರಪಂಚದಲ್ಲಿ ಮೀನಾಕ್ಷಿಯ ಬಗ್ಗೆ ಇಲ್ಲದ ಕಲ್ಪನೆ ಕಟ್ಟಿಕೊಂಡು ಕೊನೆಗೆ ಅದು ನೆರವೇರದಿದ್ದಾಗ ಆಕೆಯ ಗಂಡ...

ಮುಖವಾಡ

ಯಾವುದೋ ಊರಿನ ಸಂತೆ ನೆರೆದಿತ್ತು ಎಲ್ಲೆಡೆಯೂ ಗದ್ದಲ ಹಣ್ಣಿನಂಗಡಿ,  ತರಕಾರಿಯಂಗಡಿಗಳ ನಡುವಲ್ಲಿ ಜನರಿಂದ ಗಿಜಿಗುಡುವ ಒಂದು ಅಂಗಡಿ ಅದೇ ಮುಖವಾಡದಂಗಡಿ ಮುಖವಾಡ,  ಮುಖವಾಡ,  ತನ್ನತನವನೇ ಮರೆಯಿಸುವ ...